ಸಾಹಿತ್ಯ ಮತ್ತು ಬದುಕಿನ ಮೂಲಕ ಜಗತ್ತಿಗೆ ವಿಶ್ವಮಾನವ ಸಂದೇಶವನ್ನು ನೀಡಿದ ಕುವೆಂಪು ಅವರ ಹುಟ್ಟು ಹಬ್ಬವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಕುವೆಂಪು ಅವರ ವೈಚಾರಿಕ ಪ್ರಜ್ಞೆಯನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಲು ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿದ್ದು, ಕುವೆಂಪು ಅವರ ಕಥನದ ಬಗ್ಗೆ ವಿಶೇಷ ಅಧ್ಯಯನವನ್ನು ಮಾಡಿರುವ ಕಾನಕನಾಹಳ್ಳಿ ಶಿವಮಾಧು ಎಂ. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.